ಬೆಳಗಾವಿ : ದಂಡು ಮಂಡಳಿಗೆ ಸೇರಿದ ನಾಗರಿಕ ಪ್ರದೇಶವನ್ನು ಗುರುತಿಸಿ ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ವರದಿಯನ್ನು ಶೀಘ್ರವೇ ರಾಜ್ಯ ಸರಕಾರಕ್ಕೆ ಸಲ್ಲಿಸಬೇಕೆಂದು ಸಂಸದ ಜಗದೀಶ ಶೆಟ್ಟರ ಅವರಿಂದಿಲ್ಲಿ ಸೂಚಿಸಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಕ್ಷಣಾ ಇಲಾಖೆ ಪ್ರಸ್ತಾಪಿಸಿದ ನಿಯಮಾವಳಿಯಂತೆ ದಂಡು ಮಂಡಳಿಗೆ ಸೇರಿದ ಎಲ್ಲ ನಾಗರಿಕ ಪ್ರದೇಶವನ್ನು ಬೆಳಗಾವಿ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗುವಂತೆ ಗುರುತಿಸಿ, ಕೂಡಲೇ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ ಕ್ರಮಕೈಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಶಾಸಕ ಆಸಿಫ್ (ರಾಜು) ಸೇಠ, ಜಿಲ್ಲಾಧಿಕಾರಿ ಮಹಮದ ರೋಶನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.