ಬೆಳಗಾವಿ, ಜು.23: ಜಿಲ್ಲೆಯ ಪಶ್ಚಿಮ ಘಟ್ಟ ಹಾಗೂ ಮಲೆನಾಡಿನ ಸೆರಗಿನಲ್ಲಿ ಸಾಕಷ್ಟು ಮಳೆ ಸುರಿಯುತ್ತಿರುವ ಕಾರಣ ಖಾನಾಪುರ, ಕಿತ್ತೂರು, ಬೆಳಗಾವಿ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ ದಿ. 24ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ನೀಡಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿತಿಳಿಸಿದ್ದಾರೆ.