ಬೆಳಗಾವಿ :ಅಂತ್ಯಸಂಸ್ಕಾರಕ್ಕೆಂದು ಸಿದ್ಧತೆ ಮಾಡುತ್ತಿದ್ದ ಸಂದರ್ಭದಲ್ಲಿ ಭೂಮಾಲಿಕ ಅಡ್ಡಿಪಡಿಸಿ ಯಾವುದೇ ಕಾರಣಕ್ಕೂ ಶವಸಂಸ್ಖಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ವಿರೋಧಿಸಿದ ಭೂಮಾಲಿಕನಿಗೆ ನಾರಿ ಶಕ್ತಿ ತೋರ್ಪಡಿಸಿದ ಘಟನೆ ಬೆಳಗಾವಿ ತಾಲೂಕಿನ ಕವಳೇವಾಡಿ ಗ್ರಾಮದಲ್ಲಿ ನಡೆದಿದೆ.
ಕವಳೇವಾಡಿಯಲ್ಲಿ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ತುಕಾರಾಮ ಮೋರೆ ಎಂಬುವರು ಮೃತಪಟ್ಟಿದ್ದರು. ಸ್ಮಶಾನ ಭೂಮಿ ಇಲ್ಲದ ಕಾರಣಕ್ಕೆ ಗ್ರಾಮಸ್ಥರು, ಓಮನಿ ಗಾವಡೆ ಎಂಬುವವರ ಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಮುಂದಾಗಿದ್ದರು. ಆದರೆ ಓಮನಿ ಗಾವಡೆ ಅವರು ಈ ಸ್ಥಳದಲ್ಲಿ ಶವಸಂಸ್ಕಾರಕ್ಕೆ ಕೋರ್ಟನಿಂದ ತಡೆಯಾಜ್ಞೆ ಇದೆ. ಆದ್ದರಿಂದ ಅವಕಾಶ ನೀಡುವುದಿಲ್ಲ ಎಂದರು. ಇದರಿಂದ ಗ್ರಾಮಸ್ಥರು ಶವವಿಟ್ಟು ಪ್ರತಿಭಟಿಸಿದರು.
ಸ್ಮಶಾನದ ಭೂಮಿ ಇಲ್ಲದ ಕಾರಣಕ್ಕೆ ಈ ಮೊದಲು ಇಲ್ಲಿಯೇ ಗ್ರಾಮಸ್ಥರು ಅಂತ್ಯಕ್ರಿಯೆ ನೆರವೇರಿಸುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದ ಓಮನಿ ಗಾವಡೆ ಅವರ ಪರವಾಗಿ ಆದೇಶ ಬಂದಿತ್ತು. ಹೀಗಾಗಿ ನನ್ನ ಜಮೀನಿನಲ್ಲಿ ಅಂತ್ಯ ಸಂಸ್ಕಾರವನ್ನು ಮಾಡಬೇಡಿ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಕೊನೆಗೂ ಇದೇ ಸ್ಥಳದಲ್ಲಿ ಮಹಿಳೆಯರಿಂದಲೇ ಅಂತ್ಯ ಸಂಸ್ಕಾರ ನೆರವೇರಿತು.