ಬೆಳಗಾವಿ,: ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವು ಒಂದೇ ದಿನ ಎರಡು ಲೀವರ ಕಸಿ ಮಾಡಿ, ಸಾವಿನಂಚಿನಲ್ಲಿದ್ದವರ ಜೀವ ಉಳಿಸುವ ಅಪರೂಪದ ಸಾಧನೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅಂಗಾಂಗ ಕಸಿಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಸಾಧನೆಯ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಭಾಗದಲ್ಲಿ ಒಂದೇ ದಿನ ಎರಡು ಲೀವರ ಕಸಿ ಮಾಡಿದ ಸಾಧನೆ ಇದೇ ಪ್ರಥಮ.
ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಕಂಠ ನೀಲಕಂಟಪ್ಪ ಉಂಬರ್ಜೆ (60) ಎಂಬುವರು ಹಾಗೂ ಸವದತ್ತಿ ತಾಲೂಕಿನ ಹಿರೆಬುದ್ನೂರ ಗ್ರಾಮದ ಯುವಕ, ತವರು ಮನೆಯಲ್ಲಿರುವ ತನ್ನ ಗರ್ಭಿಣಿ ಹೆಂಡತಿಯ ಭೇಟಿಗಾಗಿ ತೆರಳುತ್ತಿರುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಣಮಂತ ಉದ್ದಪ್ಪಾ ಸರ್ವಿ (21) ಎಂಬ ಯುಕನೋರ್ವನ ಮೆದುಳು ಮೃತಗೊಂಡ ನಂತರ ತಮ್ಮ ಅಂಗಾಂಗಗಳನ್ನು ದಾನ ಮಾಡಿದ್ದರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಗಲಕೋಟೆಯ ಪೊಲೀಸ್ ಸಿಬ್ಬಂದಿಗೆ ಹಾಗೂ 63 ವರ್ಷದ ಮಂಗಳೂರಿನ ರೋಗಿಗಳಿಗೆ ಲೀವರ ಕಸಿ ಮಾಡಲಾಗಿದೆ.
ಯುವಕ ನೀಡಿದ ಎರಡು ಕಿಡ್ನಿಗಳಲ್ಲಿ ಒಂದನ್ನು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿನ ಮುಧೋಳದ ರೋಗಿಗೆ ಕಸಿ ಮಾಡಿದರೆ, ಇನ್ನೊಂದನ್ನು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿನ ರೋಗಿಗೆ ನೀಡಲಾಯಿತು. ಲೀವರ ಹಾಗೂ ಕಿಡ್ನಿ ಕಸಿಗೊಳಗಾದ ಮೂವರು ಗುಣಮುಖರಾಗುತ್ತಿದ್ದಾರೆ ಎಂದು ಗ್ಯಾಸ್ಟ್ರೊಎಂಟ್ರಾಲಾಜಿ ಮುಖ್ಯಸ್ಥರಾದ ಡಾ. ಸಂತೋಷ ಹಜಾರೆ ಅವರು ಹೇಳಿದ್ದಾರೆ.
ಅಂಗಾಂಗ ದಾನ ಮಾಡಿದ ಕುಟುಂಬ ಸದಸ್ಯರ ಕಾರ್ಯವನ್ನು ಶ್ಲಾಘಿಸಿದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು, ಓರ್ವ ವ್ಯಕ್ತಿಯು ನೀಡುವ ಅಂಗಾಂಗದಿಂದ ಇನ್ನೊಬ್ಬರಿಗೆ ಪ್ರೇರೆಪಿಸುತ್ತದೆ. ಅಲ್ಲದೇ ಇನ್ನೊಬ್ಬರ ಜೀವ ಉಳಿಸುತ್ತದೆ ಎಂದ ಅವರು, ಒಳ್ಳೆಯ ಗುಣಮಟ್ಟದ ವೈದ್ಯಕೀಯ ಸೇವೆಗಳೆಲ್ಲವನ್ನೂ ಕೈಗೆಟುಕುವ ದರದಲ್ಲಿ ಲಭಿಸುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿ- ಹುಬ್ಬಳ್ಳಿ ಧಾರವಾಡ ಪೋಲೀಸ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದಿಂದ ರಾಷ್ಟ್ರೀಯ ಹೆದ್ದಾರಿಯ ಹಸಿರು ಪಥದಲ್ಲಿ ಧಾರವಾಡ ಎಸ್ಡಿಎಂ ಆಸ್ಪತ್ರೆಯಿಂದ ಲೀವರ್ ಅನ್ನು ತರಲಾಯಿತು. ಪೊಲೀಸರ ಕಾರ್ಯಕ್ಕೆ ನಮ್ಮದೊಂದು ಸಲಾಮ ಹಾಗೂ ಹೃದಯಪೂರ್ವಕ ಧನ್ಯವಾದಗಳು.
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಡಾ. ಸಂತೋಷ ಹಜಾರೆ, ಲೀವರ ಕಸಿ ಶಸ್ತ್ರಚಿಕಿತ್ಸಕರಾದ ಡಾ. ಸುದರ್ಶನ ಚೌಗಲೆ ಅವರು ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿದ್ದಾರೆ. ಯಶಸ್ವಿ ಕಸಿ ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯರ ತಂಡವನ್ನು ಕೆಎಲ್ಇ ಸಂಸ್ಥೆಯ ಕರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು ಅಭಿನಂದಿಸಿದ್ದಾರೆ.
ಒಂದೇ ದಿನ ಎರಡು ಲೀವರ ಕಸಿ
