ಬೈಲಹೊಂಗಲ :ಮಲಪ್ರಭಾ ನದಿಯಿಂದ ಹೊಲಕ್ಕೆ ನೀರು ಎತ್ತಲು ರೈತರು ಅಳವಡಿಸಿದ್ದ ಪಂಪಸೆಟಗಳನ್ನು ಕದಿಯುತ್ತಿದ್ದ ಕಳ್ಳರನ್ನು ಬಂಧಿಸುವಲ್ಲಿ ಬೈಲಹೊಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡದ ಮಾಳಾಪೂರ ಖಾದ್ರಿಗಲ್ಲಿಯ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (೩೩), ರಿಯಾಜ ರಫೀಕ ಕಾರಿಗಾರ (೨೮), ಸಮೀರ ನಜೀರ ಹೆಬ್ಬಳ್ಳಿ (೨೧), ಜಾಕೀರಹುಸೇನ ನೂರಹ್ಮದ ಮಾಲದಾರ (೨೫) ಬಂಧಿತರು.
ಬಂಧಿತರಿಂದ ಸುಮಾರು 2 ಲಕ್ಷ ರೂ.ಮೌಲ್ಯದ 10 ಪಂಪಸೆಟ್‌ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ 3ಲಕ್ಷ ರೂ.ಮೌಲ್ಯದ ವಾಹನವನ್ನು ಜಪ್ತಿ ಮಾಡಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಾಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿಯ ದಡದಲ್ಲಿರುವ ರೈತರ ಜಮೀನಿನಲ್ಲಿರುವ ರೈತರ ೧೦ ಪಂಪಸೆಟ್‌ಗಳನ್ನು ಕಳ್ಳತನ ಮಾಡಿದ್ದರು. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೈಲಹೊಂಗಲ ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐಗಳಾದ ಗುರುರಾಜ ಕಲಬುರ್ಗಿ, ಎಫ್.ವಾಯ್.ಮಲ್ಲೂರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಸ್.ಯು.ಮೆಣಸಿನಕಾಯಿ, ಚೇತನ ಬುದ್ನಿ, ಎಂ.ಬಿ.ಕಂಬಾರ, ಎಮ್.ಎಸ್.ದೇಶನೂರ, ಟೆಕ್ನಿಕಲ್ ವಿಭಾಗದ ಸಿಬ್ಬಂದಿ ವಿನೋದ ಠಕ್ಕನವರ, ಸಚೀನ ಪಾಟೀಲ ಅವರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.