ಬೆಳಗಾವಿ : ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ಹಾಗೂ  ಘಟಪ್ರಭಾ ನದಿಯಿಂದ ಅತ್ಯಧಿಕ ನೀರನ್ನು ಹರಿಬಿಡುತ್ತಿರುವ ಪರಿಣಾಮ ಆ ಭಾಗದ  44 ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ.  ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿಯಿಂದ ಮಿರಜವರಗೆ ಪ್ರಯಾಣಿಕವಿಶೇಷ ರೈಲು ಅಗಸ್ಟ್ 1 ರಿಂದ 4 ದಿನಗಳವರೆಗೆ ಸಂಚರಿಸಲಿದೆ.

ಈ ಕುರಿತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೈರುತ್ಯ ರೇಲ್ವೆ  ಮಹಾಪ್ರಬಂಧಕರಿಗೆ ರೈಲು ಬಿಡುವಂತೆ ಕೋರಿಕೊಂಡ ಪರಿಣಾಮ 5 ದಿನಗಳ ಕಾಲ ರೈಲು ಸಂಚರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ ಜು-30ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಬೆಳಗಾವಿ-ಮಿರಜ ರೈಲು ಅ-01 (07301) ಮುಂಜಾನೆ 06 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 09ಕ್ಕೆ ಮಿರಜ ನಿಲ್ದಾಣ ತಲುಪಲಿದೆ.

ಮಿರಜ-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 09.50 ಕ್ಕೆ ಮಿರಜನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.

ಬೆಳಗಾವಿ-ಮಿರಜ ರೈಲು  (07303) ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮಿರಜ ತಲುಪಲಿದೆ.

ಮಿರಜ-ಬೆಳಗಾವಿ ರೈಲು ಸಂಖ್ಯೆ (07304)  ಸಂಜೆ 05.35 ಕ್ಕೆ ಮಿರಜನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿದ್ದಾರೆ.