ಬೆಳಗಾವಿ,:ನಗರದ ಉದ್ಯಮಿ ಹಾಗೂ ಗುತ್ತಿಗೆದಾರ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಉಮಾ ಉರ್ಫ ಸರಿತಾ, ಶೋಭಿತ್ ಗೌಡ ಹಾಗೂ ಪವನ್ ಅವರನ್ನು ಬಂಧಿಸಿರುವ ಪೊಲೀಸರು ಜೈಲಿಗೆಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಳ ಮಾರುತಿ ಪೊಲೀಸರು ಮೂವರನ್ನು ಗುರುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಅಕ್ಟೋಬರ್ ಒಂಬತ್ತರಂದು ಸಂತೋಷ್ ಪದ್ಮಣ್ಣವರ ಅವರನ್ನು ಈ ಮೂವರು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಆದರೆ ಪತ್ನಿ ಉಮಾ ಅಲಿಯಾಸ್ ಸರಿತಾ, ಪತಿಯ ಸಾವಿಗೆ ಹೃದಯಘಾತ ಕಾರಣ ಎಂದು ಬಿಂಬಿಸಿದ್ದರು. ಆದರೆ, ಮಗಳಿಗೆ ಸಂದೇಹ ಬಂದು ಮಾಳಮಾರುತಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪೊಲೀಸರು ಪ್ರಕರಣದ ಸತ್ಯಾ ಸತ್ಯತೆ ಬಯಲಿಗೆ ಎಳೆಯುವಲ್ಲಿ ನಿರತರಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಅವರು, ಸಂತೋಷ ಪದ್ಮಣ್ಣವರ ಸಾವಿನ ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುತ್ತಿದೆ. ಎಲ್ಲಾ ವಿಧವಾಗಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂತೋಷ ಪದ್ಮಣ್ಣವರ ಪತ್ನಿ ಉಮಾ ಬಂಧನ
