ಬೆಳಗಾವಿ.: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ ಹಾಗೂ ರಾಣಿ ಚನ್ನಮ್ಮಳ ಇತಿಹಾಸವನ್ನು ನಾಡಿಗೆ ಸಾರುವ ಉದ್ದೇಶದೊಂದಿಗೆ ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಉತ್ಸವವು ಚನ್ನಮ್ಮಳ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನ
ಕಾಕತಿಯಲ್ಲಿಂದು ಜರುಗಿದ ಕಿತ್ತೂರು ಉತ್ಸವ-2024, ವಿಜಯೋತ್ಸವದ 200ನೇ ವರ್ಷಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,
ಕಾಕತಿಯಿಂದಲೆ ರಾಣಿ ಚನ್ನಮ್ಮಳ ಇತಿಹಾಸ ಪ್ರಾರಂಭವಾಗುವ ಹಿನ್ನಲೆಯಲ್ಲಿ ಕಿತ್ತೂರು ಉತ್ಸವವನ್ನು
ಕಾಕತಿಯಲ್ಲಿ ಸಾಂಕೇತಿಕವಾಗಿ ಪ್ರಾರಂಭಿಸಲಾಗುತ್ತಿದೆ ಎಂದರು.
ಸ್ವಾತಂತ್ರ್ಯಕ್ಕಾಗಿ ಅನೇಕ ಮಹನಿಯರು ಹೊರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿರುತ್ತಾರೆ. ಈ ಸಾಲಿನಲ್ಲಿ ಕಿತ್ತೂರು ರಾಣಿ ಚನ್ನಮ್ಮ ಕೂಡ ಮೊದಲಿಗರಾಗಿದ್ದು, ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನು ಮುಡುಪಾಗಿಟ್ಟು ಅಪ್ರತಿಮವಾಗಿ ಹೋರಾಡಿದ ಮಹಾನುಭಾವೆಯಾಗಿದ್ದಳು.
ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೊರಾಟ ನಡೆಸಿ ನಾಡು ನುಡಿಗಾಗಿ ತನ್ನ ಪ್ರಾಣವನ್ನು ಮುಡುಪಾಗಿಟ್ಟಿದ ಕಿತ್ತೂರು ರಾಣಿ ಚನ್ನಮ್ಮಳ ಇತಿಹಾಸವನ್ನು ಪ್ರತಿಯೊಬ್ಬರಿಗೂ ತಿಳಿಯಪಡಿಸುವುದು ಉತ್ಸವದ ಮುಖ್ಯ ಉದ್ದೇಶವಾಗಿದೆ.
ಮುಂದಿನ ದಿನಗಳಲ್ಲಿ ಬೇರೆ ತಾಲೂಕುಗಳಲ್ಲಿ ಸಹ ಕಿತ್ತೂರಿನ ಇತಿಹಾಸ ಸಾರುವಂತಹ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವದು . ಇದರ ಜೊತೆಗೆ ಕಿತ್ತೂರು ಹಾಗೂ ಕಾಕತಿ ಅಭಿವೃದ್ದಿಗೆ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
ಡಾ.ಗುರುದೇವಿ ಹುಲೆಪ್ಪನವರಮಠ ಅವರು, ಚನ್ನಮ್ಮಾಜಿಯ ಇತಿಹಾಸ ಹಾಗೂ ಸಾಧನೆಗಳ ಕುರಿತು ಮಾತನಾಡಿ, ರಾಣಿ ಚನ್ನಮ್ಮನ ತವರೂರಾದ ಕಾಕತಿ 280 ಗ್ರಾಮಗಳಲ್ಲಿ ಆಡಳಿತ ವ್ಯಾಪ್ತಿ ಹೊಂದಿದ್ದ ಕಿತ್ತೂರು 239 ವರ್ಷಗಳ ಕಾಲ ಆಡಳಿತ ನಡೆಸಿದೆ. ಬ್ರಿಟಿಷರು ಕಿತ್ತೂರು ಸಂಸ್ಥಾನದ ವಿರುದ್ಧ ಮೊದಲು ಸೋಲು ಕಂಡಿತು. ರಾಣಿ ಚನ್ನಮ್ಮಳ ಜೀವನ ಹಾಗೂ ಸಾಧನೆಗಳು ನಮಗೆಲ್ಲ ಆದರ್ಶಗಳಾಗಿವೆ.
ಚನ್ನಮ್ಮಾಜಿ ಹುಟ್ಟಿದ ಮನೆ ಹಾಗೂ ಕೊಟ್ಟ ಮನೆಯ ಕೀರ್ತಿ ತಂದಂತಹ ಮಹಾನು ಭಾವೆಯಾಗಿದ್ದು, ಅವಳ ನಾಡಾಭಿಮಾನ, ಧೈರ್ಯ ಇಂದು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮುಕ್ತಿಮಠದ ಶ್ರೀ ಶಿವಸಿದ್ಧ ಸೋಮೆಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕಾಕತಿಯ ಉದಯ ಮಹಾಸ್ವಾಮಿಗಳು ಆಶಿರ್ವಚನ ನೀಡಿದರು.
ಸಿದ್ದು ಸುಣಗಾರ, ಅಯ್ಯಪ್ಪ ಕೊಳೆಕರ ಹಾಗೂ ಎಸ್.ಡಿ.ಪಾಟೀಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ರಾಜು (ಆಸೀಫ್) ಸೇಠ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಗ್ರಾ.ಪಂ.ಅಧ್ಯಕ್ಷ ವರ್ಷಾ ಮುಚ್ಚಂಡಿಕರ, ವಿನಯ ನಾವಲಗಟ್ಟಿ, ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ, ಉಪವಿಭಾಗಾಧಿಕಾರಿ ಶ್ರವಣ ನಾಯಕ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾ ಉಸ್ತವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಆಕರ್ಷಕ ಮೆರವಣಿಗೆಗೆ ಚಾಲನೆ ನೀಡಿದರು.
ಕಾಕತಿಯ ಪಿ.ಬಿ.ರಸ್ತೆಯಿಂದ ಪ್ರಾರಂಭವಾದ ಆಕರ್ಷಕ ಮೆರವಣಿಗೆಗೆ ಪೂರ್ಣಕುಂಬ ಮೇಳ, ಪಥಸಂಚಲನ, ವಿವಿಧ ಜಾನಪದ ಕಲಾ ತಂಡಗಳು ಹಾಗೂ ಅಪರ ಸಂಖ್ಯೆಯ ಜನಸ್ತೊಮದೊಂದಿಗೆ ಕಾಕತಿಯ ರಾಣಿ ಚನ್ನಮ್ಮಳ ಪ್ರತಿಮೆಗೆ ಆಗಮಿಸಿ ಮುಕ್ತಾಯಗೊಂಡಿತು.
ಚನ್ನಮ್ಮಳ ಇತಿಹಾಸ ಸಾರುವ ಉತ್ಸವ: ಸಚಿವ ಸತೀಶ್ ಜಾರಕಿಹೊಳಿ
