ಬೆಳಗಾವಿ: ಭ್ರಷ್ಟಾಚಾರದ ಆರೋಪದ ಹಿನ್ನಲೆಯಲ್ಲಿ ಗೋಕಾಕ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐದು ತಂಡವಾಗಿ ಐವತ್ತು ಜನ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗಾಢನಿದ್ದೆಯಲ್ಲಿದ್ದ ಅಧಿಕಾರಿಗಳ ಮನೆ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೋಕಾಕ್ ಗ್ರೇಡ್-2 ತಹಶೀಲ್ದಾರ್ ಶ್ರೀಕಾಂತ ಬೆಟಗೇರಿ, ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಸೇರಿ ಹಲವರ ಮನೆ ಮೇಲೆ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ಬಿ.ಎಸ್.ಪಾಟೀಲ್ ನೇತೃತ್ವದಲ್ಲಿ
ದಾಳಿ ನಡೆಸಿ ಮನೆ ಹಾಗೂ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಎಸ್.ಎಸ್.ವಾಯ್ ಪಿಂಚಣಿ ಮಂಜೂರಾತಿ ಆರೋಪ ಕೇಳಿ ಬಂದಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಈ ಹಿಂದೆಯೂ ದಾಳಿ ಮಾಡಲಾಗಿತ್ತು. ಸಧ್ಯ ಮತ್ತೊಮ್ಮೆ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ.
ಅಧಿಕಾರಿಗಳು ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ತಹಶೀಲ್ದಾರ್ ಕಚೇರಿ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲಿಸುತ್ತಿದ್ದಾರೆ.