ಬೆಳಗಾವಿ ಸೆ.29 : ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವು ಸಪ್ಟೆಂಬರ 2023ರಲ್ಲಿ ಒಂದರ ಹಿಂದೆ ಒಂದು ಹೀಗೆ ಕೇವಲ 12 ದಿನಗಳಲ್ಲಿ ಮೂರು ಲೀವರ ಕಸಿ ಮಾಡಿ ಸಾವಿನಂಚಿನಲ್ಲಿದ್ದ ಮೂವರ ಜೀವ ಉಳಿಸುವ ಅಪರೂಪದ ಸಾಧನೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದು, ಮತ್ತೊಮ್ಮೆ ಸಾಧನೆಯ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 25 ವರ್ಷದ ಯುವಕ ದುರ್ಗೇಶ ಉಪ್ಪಾರ ಹಾಗೂ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಾರಾಷ್ಟç ಜೈಸಿಂಗಪೂರ ಸಾಕ್ಷಿ ಬಂಡಿವಡ್ಡರ (42), 25 ವರ್ಷದ ಯುಕನೋರ್ವ ಮೆದುಳು ಮೃತಗೊಂಡ ನಂತರ ತಮ್ಮ ಅಂಗಾAಗಳನ್ನು ದಾನ ಮಾಡಿದ್ದರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬೆಲ್ಲದ ಬಾಗೇವಾಡಿ, ಚಿಕ್ಕಮಗಳೂರು ಹಾಗೂ ಕರೋಶಿಯ ರೋಗಿಗಳಿಗೆ ಲೀವರ ಕಸಿ ಮಾಡಲಾಗಿದೆ. ಮೂವರು ಗುಣಮುಖರಾಗುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಗ್ಯಾಸ್ಟೊçÃಎಂಟ್ರಾಲಾಜಿ ಮುಖ್ಯಸ್ಥರಾದ ಡಾ. ಸಂತೋಷ ಹಜಾರೆ ಅವರು ಹೇಳಿದ್ದಾರೆ.
ಅಂಗಾAಗ ದಾನ ಮಾಡಿದ ಕುಟುಂಬ ಸದಸ್ಯರ ಕರ‍್ಯವನ್ನು ಶ್ಲಾಘಿಸಿದ ಕೆಎಲ್‌ಇ ಸಂಸ್ಥೆಯ ಕರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು, ಓರ್ವ ವ್ಯಕ್ತಿಯು ನೀಡುವ ಅಂಗಾAಗದಿAದ ಇನ್ನೊಬ್ಬರಿಗೆ ಪ್ರೇರೆಪಿಸುತ್ತದೆ. ಅಲ್ಲದೇ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಭಾಗದ ಯಾವುದೇ ರೋಗಿಯು ಒಳ್ಳೆಯ ಗುಣಮಟ್ಟದ, ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಯಿಂದ ವಂಚಿತರಾಗಬಾರದು ಹಾಗೂ ವೈದ್ಯಕೀಯ ಸೇವೆಗಳೆಲ್ಲವನ್ನೂ ಕೈಗೆಟುಕುವ ದರದಲ್ಲಿ ಲಭಿಸುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲೀವರ ಸೇರಿದಂತೆ ಅಂಗಾAಗಗಳ ಕಸಿ ಮಾಡಲು ಅತ್ಯಾಧುನಿಕ ಬೃಹತ್ ವೈದ್ಯಕೀಯ ಮೂಲಸೌಕರ್ಯ, ತರಬೇತಿ ಪಡೆದ ವೃತ್ತಿನಿರತ ಕಾರ್ಯಪಡೆ, ನಿಖರವಾದ ಯೋಜನೆ, ಕಸಿ ನಂತರದ ತೀವ್ರ ನಿಗಾ ವಹಿಸಬೇಕಾಗಿರುತ್ತದೆ. ವೃತ್ತಿನಿರತ ತಂಡದ ಕರ‍್ಯಕ್ಕೆ ಆಡಳಿತಾತ್ಮಕ ಸಹಕಾರದ ಅಗತ್ಯವೂ ಅಷ್ಟೇ ಮುಖ್ಯವಾಗಿರುತ್ತದೆ. ಅದೆಲ್ಲ ಇಲ್ಲಿ ಸಮ್ಮಿಳಿತಗೊಂಡಿದೆ. ಆದ್ದರಿಂದಲೇ ಕೇವಲ 12 ದಿನಗಳಲ್ಲಿ 3 ಲೀವರ ಕಸಿ ಮಾಡಲು ಸಾಧ್ಯವಾಗಿದೆ. ಅದರಂತೆ ಕೇವಲ 10 ತಿಂಗಳಲ್ಲಿ 9 ಯಶಸ್ವಿ ಲೀವರ ಕಸಿ ಮಾಡಲಾಗಿದ್ದು, ಉತ್ತರ ಕರ್ನಾಟಕ ಮತ್ತು ಗೋವಾ ರಾಜ್ಯವನ್ನೊಳಗೊಂಡAತೆ ಏಕೈಕ ಕೇಂದ್ರ. ಬೆಳಗಾವಿ- ಹುಬ್ಬಳ್ಳಿ ದಾರವಾಡ ಪೋಲೀಸರ ಸಹಕಾರದಿಂದ ರಾಷ್ಟಿçÃಯ ಹೆದ್ದಾರಿಯಲ್ಲಿ ಹಸಿರು ಪಥದಲ್ಲಿ ಕೇವಲ 58 ನಿಮಿಷಗಳಲ್ಲಿ ಬೆಳಗಾವಿಗೆ ಅಂಗಾAಗಗಳನ್ನು ತರಲು ಸಾಧ್ಯವಾಗುತ್ತಿದೆ. ಪೊಲೀಸರ ಕರ‍್ಯಕ್ಕೆ ನಮ್ಮದೊಂದು ಸಲಾಮ ಹಾಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ
ಬೆಂಗಳೂರಿನ ಅಸ್ಟರ ಆಸ್ಪತ್ರೆಯ ಗ್ಯಾಸ್ಟೊçÃಎಂಟ್ರಾಲಾಜಿ ಮತ್ತು ಉದರ ರೋಗ ವಿಭಾಗದ ಡಾ. ಸೋನಲ್ ಅಸ್ಥಾನಾ ಮತ್ತು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಡಾ. ಸಂತೋಷ ಹಜಾರೆ, ಲೀವರ ಕಸಿ ಶಸ್ತçಚಿಕಿತ್ಸಕರಾದ ಡಾ. ಸುದರ್ಶನ ಚೌಗಲೆ ಅವರು ಯಶಸ್ವಿ ಶಸ್ತçಚಿಕಿತ್ಸೆ ನೆರವೇರಿಸಿದ್ದು, ಅರವಳಿಕೆ ತಜ್ಞವೈದ್ಯರಾದ ಡಾ ರಾಜೇಶ ಮಾನೆ ಮತ್ತು ಡಾ. ಮಂಜುನಾಥ ಪಾಟೀಲ ಅವರು ಸಹಕಾರ ನೀಡಿದರು. ಆಡಳಿತಾಧಿಕಾರಿ ಡಾ. ಬಸವರಾಜ ಬಿಜ್ಜರಗಿ, ಗೀತಾ ದೇಸಾಯಿ ಬಸವರಾಜ ಮಜತಿ ಅವರು ಸಹಕಾರ ನೀಡಿದರು.
ಯಶಸ್ವಿ ಕಸಿ ಶಸ್ತçಚಿಕಿತ್ಸೆ ನೆರವೇರಿಸಿದ ವೈದ್ಯರ ತಂಡವನ್ನು ಕೆಎಲ್‌ಇ ಸಂಸ್ಥೆಯ ಕರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು ಅಭಿನಂದಿಸಿದ್ದಾರೆ.